25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!