23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!