25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya
error: Content is protected !!