26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಡಂತ್ಯಾರು ಅಂಬೇಡ್ಕರ್ ಭವನದ ಆವರಣದಲ್ಲಿ ಮದ್ಯಪಾನ, ಅರೋಗ್ಯ, ಜಲಸಂರಕ್ಷಣೆ, ಜ್ಞಾನ ವಿಕಾಸ ಯೌಟ್ಯೂಬ್ ನಲ್ಲಿ ಬಿತ್ತರ ವಾಗುವ ಕಾರ್ಯಕ್ರಮದ ಬಗ್ಗೆ ಬೀದಿ ನಾಟಕ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರೆಂಕಿ ಕಾರ್ಯಕ್ಷೇತ್ರದ ಒಕ್ಕೂಟ ಅಧ್ಯಕ್ಷರಾದ ಬಾಲಚಂದ್ರ ಹೆಗ್ಗಡೆ ರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪರವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟನೆ ಮಾಡಿ ಕಾರ್ಯಕ್ರಮದ ಉದ್ದೇಶ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಸದಸ್ಯರಾದ ಶ್ರೀಮತಿ ಸಂಗೀತ ಶೆಟ್ಟಿ, ಪಾರೆಂಕಿ ಎ ಒಕ್ಕೂಟ ಅಧ್ಯಕ್ಷರಾದ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ, ಲೀಲಾವತಿ, ಶೋಭಾ ಉಪಸ್ಥಿತರಿದ್ದರು. ಗಣೇಶಪುರ ಶ್ರೀ ಸಿದ್ದಿ ವಿನಾಯಕ ಯಕ್ಷಗಾನ ಮಂಡಳಿ ಸುರತ್ಕಲ್ ನ ಸಂಯೋಜಕರದ ಗಿರೀಶ್ ಬಳಗದವರಿಂದ ಅತ್ಯುತ್ತಮ ರೀತಿಯಲ್ಲಿ ಮನೋರಂಜಕವಾಗಿ ಬೀದಿ ನಾಟಕವನ್ನು ನಡೆಸಿಕೊಟ್ಟರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಹರಿಣಿ ನಿರೂಪಿಸಿ, ಮಡಂತ್ಯಾರು ವಲಯ ಮೇಲ್ವಿಚಾರಕರದ ವಸಂತ ಕುಮಾರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
error: Content is protected !!