24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ. 18 ರಂದು ಪಂಚದುರ್ಗಾ ಸಹಕಾರಿ ಸಭಾಭವನ ಆದೂರು ಪೆರಾಲ್ ಕೊಯ್ಯೂರುನಲ್ಲಿ ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ 137.95 ಕೋಟಿ ವ್ಯವಹಾರ ಮಾಡಿದ್ದು,53.26 ಲಕ್ಷ ನಿವ್ವಳ ಲಾಭ ಗಳಿಸಿ ಸದಸ್ಯರಿಗೆ 9.50 ಶೇ ಡಿವಿಡೆಂಟ್ ಘೋಷಿಸಲಾಯಿತು. ಸಂಘವು ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕುಮಾರ್ ಹೇಳಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಎಂ.ಕೆ, ಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್,ನಿರ್ದೇಶಕರರಾದ ಅಶೋಕ್ ಭಟ್, ಉಜ್ವಲ್ ಕುಮಾರ್, ಎನ್.ಪರಮೇಶ್ವರ ಗೌಡ, ರವೀಂದ್ರನಾಥ ಪಿ, ಪುರುಷೋತ್ತಮ, ಡೀಕಯ್ಯ ಪೂಜಾರಿ, ಶ್ರೀಮತಿ ಗುಲಾಬಿ,ಶ್ರೀಮತಿ ರೇವತಿ , ಯತೀಶ, ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಂದೇಶ ಕುಮಾರ್ ಎಂ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೊಯ್ಯುರು ಸಿಎ ಬ್ಯಾಂಕಿನ ಸಿಬ್ಬಂದಿಗಳಾದ ಮಮತಾ ರೈ,ಕೇಶವ ಕೆ, ವಿನಾಯಕ ಬಿ,ಸುಕನ್ಯಾ ಬಿ.ಜೆ, ಲೋಕೇಶ್, ಯತೀಶ್, ದಿಲೀಪ್ ಕುಮಾರ್,ಸುದರ್ಶನ,ಸ್ವಸಹಾಯ ಪ್ರೇರಕಿ ಚಂಪಾ, ದೈನಂದಿನ ಠೇವಣಿ ಸಂಗ್ರಾಹಕಿ ಗೀತಾ, ಸರಾಫರು ಯೋಗೀಶ್ ಆಚಾರ್ಯ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ‌

Related posts

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!