September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

ವೇಣೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ಬಿ.ಜೆ.ಪಿ.ಮಂಡಲದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಹಯೋಗದಿಂದ ಗುಂಡೂರಿ ಗ್ರಾಮದಲ್ಲಿರುವ ಅಬಲೆಯರ ಪುನರ್ವಸತಿ ಕೇಂದ್ರ ಸೇವಾಶ್ರಮದಲ್ಲಿ ಪ್ರಧಾನಿ ಮೋದೀಜಿಯವರ ಹುಟ್ಟು ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಸೆ.17 ರಂದು ಆಚರಿಸಲಾಯಿತು.


ಮೋದೀಜಿಯವರ ನಾಯಕತ್ವವು ಪ್ರಬಲವಾಗಲು ಮತ್ತು ದೇಶದ ಬಿ.ಜೆ.ಪಿ ಸರ್ವ ಕಾರ್ಯಕರ್ತರ ನಾಯಕತ್ವವು ಉತ್ತಮ ಗುಣಮಟ್ಟದ್ದಾಗಲು ಈ ಮೂಲಕ ಇನ್ನೂ ಹೆಚ್ಚಿನ ದೇಶದ ಅಭಿವೃದ್ಧಿ ಆಗಲು ಸೇವಾಶ್ರಮದ ಆರಾಧ್ಯ ಗುರು ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿ, ಸೇವಾಶ್ರಮದ ಆಶ್ರಮವಾಸಿಗಳಿಗೆ ಫಲವಸ್ತು ಹಾಗೂ ಒಂದು ಕಿಂಟ್ವಾಲ್ ಅಕ್ಕಿ ನೀಡಿ ಕಾರ್ಯಕರ್ತರಿಂದ ಸಂಭ್ರಮಾಚರಿಸಲಾಯಿತು.


ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಧ್ಯಕ್ಷ ನೇಮಯ್ಯಕುಲಾಲ್, ಸದಸ್ಯರಾದ ಸಂಭಾಷಿಣಿ ಉದಯಕುಮಾರ್, ಹರೀಶ್ ಪಿ.ಎಸ್, ಅರುಣ್ ಹೆಗ್ಡೆ ಕರಿಮಣೇಲು ,ದಿನೇಶ್ ತಾರಿಪಡ್ಪು, ಕಾರ್ಯಕರ್ತರಾದ ಪ್ರಶಾಂತ್ ಹೆಗ್ಡೆ, ಗಿರೀಶ್ ಕುಲಾಲ್, ಪ್ರತೀಶ್ ಹೊಸಂಗಡಿ, ಸತೀಶ್ ಪೆರಿಂಜೆ, ಮತ್ತಿತ್ತರು ಉಪಸ್ಥಿತರಿದ್ದರು.


ಕೃಷಿ ಪತ್ತಿನ ಸಹಕಾರಿ ಸಂಘ ಇದರ ಅಧ್ಯಕ್ಷ ಸುಂದರ ಹೆಗ್ಡೆ‌ ಮೋದೀಜಿಯವರ ಜನ್ಮದಿನದ ಬಗ್ಗೆ ಪ್ರಸ್ತಾಪನೆ ಗೈದರು. ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಸ್ವಾಗತಿಸಿದರು.

Related posts

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!