23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya
error: Content is protected !!