23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya
error: Content is protected !!