September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!