22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!