22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಚಿತ್ರ ವರದಿವರದಿ

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸರಕಾರದ ಅಧೀನ ಕಾರ್ಯದರ್ಶಿ ಶ್ರೀ ವಿಕಾಸ್, ಶ್ರೀವಾಸ್ತವ್,, ಸೆ.18 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.


ಬಳಿಕ, ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಸಂದರ್ಶಿಸಿ, ಗ್ರಾಮ ಪಂಚಾಯತ್ ನ ಕಾರ್ಯನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ , ಗ್ರಾಮ ಪಂಚಾಯತ್ ಸದಸ್ಯರು, ಮಾನ್ಯ ಕಾರ್ಯನಿರ್ವಹಣಾಧಿಕಾರಿಯಾದ ಕುಸುಮಾಧರ್, AEE ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್ , ಜಿಲ್ಲಾ ಸಂಯೋಜಕರಾದ ಡೊಂಬಯ್ಯ , ಕಾರ್ಯದರ್ಶಿ ಶ್ರವಣ್ ಕುಮಾರ್ , ಸ್ವಚ್ಛತಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!