24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
error: Content is protected !!