September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಡಂತ್ಯಾರು ಅಂಬೇಡ್ಕರ್ ಭವನದ ಆವರಣದಲ್ಲಿ ಮದ್ಯಪಾನ, ಅರೋಗ್ಯ, ಜಲಸಂರಕ್ಷಣೆ, ಜ್ಞಾನ ವಿಕಾಸ ಯೌಟ್ಯೂಬ್ ನಲ್ಲಿ ಬಿತ್ತರ ವಾಗುವ ಕಾರ್ಯಕ್ರಮದ ಬಗ್ಗೆ ಬೀದಿ ನಾಟಕ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರೆಂಕಿ ಕಾರ್ಯಕ್ಷೇತ್ರದ ಒಕ್ಕೂಟ ಅಧ್ಯಕ್ಷರಾದ ಬಾಲಚಂದ್ರ ಹೆಗ್ಗಡೆ ರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪರವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟನೆ ಮಾಡಿ ಕಾರ್ಯಕ್ರಮದ ಉದ್ದೇಶ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಸದಸ್ಯರಾದ ಶ್ರೀಮತಿ ಸಂಗೀತ ಶೆಟ್ಟಿ, ಪಾರೆಂಕಿ ಎ ಒಕ್ಕೂಟ ಅಧ್ಯಕ್ಷರಾದ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ, ಲೀಲಾವತಿ, ಶೋಭಾ ಉಪಸ್ಥಿತರಿದ್ದರು. ಗಣೇಶಪುರ ಶ್ರೀ ಸಿದ್ದಿ ವಿನಾಯಕ ಯಕ್ಷಗಾನ ಮಂಡಳಿ ಸುರತ್ಕಲ್ ನ ಸಂಯೋಜಕರದ ಗಿರೀಶ್ ಬಳಗದವರಿಂದ ಅತ್ಯುತ್ತಮ ರೀತಿಯಲ್ಲಿ ಮನೋರಂಜಕವಾಗಿ ಬೀದಿ ನಾಟಕವನ್ನು ನಡೆಸಿಕೊಟ್ಟರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಹರಿಣಿ ನಿರೂಪಿಸಿ, ಮಡಂತ್ಯಾರು ವಲಯ ಮೇಲ್ವಿಚಾರಕರದ ವಸಂತ ಕುಮಾರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!