23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

ಧರ್ಮಸ್ಥಳ :ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.15ರಂದು ಬಹರೈನ್ ಮತ್ತು ಸೆ.17 ರಂದು ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಗುರು ಸೇವಾ ಸಮಿತಿ ಬಹೆರೈನ್ ಬಿಲ್ಲವಾಸ್ ವತಿಯಿಂದ ಕನ್ನಡ ಸಂಘದಲ್ಲಿ 20 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬ್ರಹ್ಮಶ್ರೀ ನಾರಾಯಣಗೆ ಗುರುಗಳ 169 ಜಯಂತಿ ಕಾರ್ಯಕ್ರಮದಲ್ಲಿ ಬಹರೈನ್ ಬಿಲ್ಲವಾಸ್ ಅಧ್ಯಕ್ಷ ಹರೀಶ್ ಪೂಜಾರಿ, ಮಾಜಿ ಅಧ್ಯಕ್ಷ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ರಾಜ ಕುಮಾರ್, ಕಾರ್ಯದರ್ಶಿ ಸಂಪತ್ ಕುಮಾರ್, ದುಬೈ ಬಿಲ್ಲವ ಫ್ಯಾಮಿಲಿ ಅಧ್ಯಕ್ಷ ದೀಪಕ್ ಪೂಜಾರಿ, ಗೌರವ ಅಧ್ಯಕ್ಷ ಸತೀಶ್ ಪೂಜಾರಿ, ಮಾಜಿ ಅಧ್ಯಕ್ಷ ಪ್ರಭಾಕರ ಸುವರ್ಣ ಕರ್ನೆನಿರೆ, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯ ಲೋಕೇಶ್ ಪುತ್ರನ್, ದುಬೈ ಕನ್ನಡ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ದುಬೈ,ಜೀತೇಂದ್ರ ಸುವರ್ಣ, ಮತ್ತು ಸಮಿತಿ ಸದಸ್ಯರು ಹಾಜರಿದ್ದರು. ಸ್ವಾಮೀಜಿಯವರ ಜೊತೆಗೆ ಗುರುದೇವ ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ, ಕೃಷ್ಣಪ್ಪ ಗುಡಿಗಾರ, ರಾಘವೇಂದ್ರ ಭಾಗವಹಿಸಿದ್ದರು.

Related posts

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya
error: Content is protected !!