22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

ಬೆಳ್ತಂಗಡಿ : ಇಲ್ಲಿಯ 13ನೇ ವರ್ಷದ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗಣೇಶೋತ್ಸವ
ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುನಾರಾಯಣ ಸಭಾ ಭವನದಲ್ಲಿ ಸೆ.18ರಂದು ನಡೆಯಿತು.

ಪ್ರಧಾನ ಭಾಷಣಕಾರರಾಗಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ನಿವೃತ್ತ ಶಿಕ್ಷಕಿ ಮನೋರಮಾ ತೋಳ್ಪಾಡಿತ್ತಾಯ ಮಾತನಾಡಿ ಶ್ರೀಗಣೇಶೋತ್ಸವ ಆಚರಣೆಯ ಮಹತ್ವವನ್ನು ವಿವರಿಸಿದರು.

13ನೇ ವರ್ಷದ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದರು.

ಸಭಾ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಅನಂತ್ ಭಟ್ ಮಚ್ಚಿಮಲೆ ಉದ್ಘಾಟಿಸಿ ಮಾತನಾಡಿ ಸಮಾಜದ ದುಷ್ಟ ಶಕ್ತಿಯನ್ನು ನಾಶ ಮಾಡಲು ಜಾತಿ ಮತ ಭೇದ ಮರೆತು ಗೌರಿ ಗಣೇಶ ಹಬ್ಬದ ಆಚರಣೆ ಮಾಡಬೇಕಾಗಿದೆ.
ಎಲ್ಲರೂ ಒಂದಾಗಿ ಸಂಘಟಿತರಾಗಿ ಗಣೇಶ ಹಬ್ಬ ಆಚರಿಸಿದಾಗ ಒಳ್ಳೆಯದಾಗುತ್ತದೆ. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವುದು ಶ್ರೇಷ್ಠ ಕಾರ್ಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸುಕುಮಾರ್ ಜೈನ್, ರಾಮಕೃಷ್ಣಭಟ್ ಚೊಕ್ಕಾಡಿ, ನಾರಾಯಣ ಗೌಡ ಕೊಳ್ತಿಗೆ, ಗಿರೀಶ್ ಹೆಗ್ಡೆ, ಕಲ್ಲೇಶ್ , ವಿಜಯ ಕುಮಾರ್ , ಪ್ರಶಾಂತ್ ಸುವರ್ಣ, ಆನಂದ ದೇವಾಡಿಗ , ಶೇಷಗಿರಿ ಶೆಣೈ , ನಾಟಿ ವೈದ್ಯೆ ಸೇಸಮ್ಮ, ದೈವ ನರ್ತಕ ದೇವು ಪರವ , ನಾಗಪ್ಪ ಧರ್ಮಸ್ಥಳ, ದೇಜಮ್ಮ, ಮುಂತಾದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು.


ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಕೇಶವ ಬೆಳಾಲು ಸ್ವಾಗತಿಸಿದರು., ಚಂದ್ರಹಾಸ ಬಳೆಂಜ ನಿರೂಪಿಸಿ, ಮೋಹನ್ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
error: Content is protected !!