ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಕೊಕ್ಕಡ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು.

ಬೆಳಿಗ್ಗೆ 108 ಕಾಯಿ ಗಣಹೋಮ ಹಾಗೂ ರಂಗಪೂಜೆ ನೆರವೇರಿತು. ನಂತರ ದೇವರಿಗೆ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!