27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಸೆ.18ರಿಂದ ಅ.5 ರವರೆಗೆ ನಡೆಯುವ ಕಿಸ್ನ ಹಾಗೂ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆಯು ಸೆ.19 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಸೌಮ್ಯ ಜಯಂತ್ ಭಾಗವಹಿಸಿದ್ದರು.

ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ ಮಾತನಾಡಿ, ಗುಣಮಟ್ಟಕ್ಕೆ, ವಿನ್ಯಾಸ ಎಲ್ಲದರಲ್ಲೂ ಮುಳಿಯ ಜ್ಯುವೆಲ್ಸ್ ಎತ್ತಿದ ಕೈ, ಮುಳಿಯವು ಬೆಳ್ತಂಗಡಿಯಲ್ಲಿ ಮನೆಮಾತಾಗಿದ್ದು, 365 ದಿನವೂ ಇಲ್ಲಿ ಹಬ್ಬದಂತೆ ವ್ಯಾಪಾರ ನಡೆಯಲಿ ಎಂದು ಶುಭಹಾರೈಸಿದರು.


ಜಿ. ಪಂ. ಮಾಜಿ ಸದಸ್ಯೆ ಶ್ರೀಮತಿ ಸೌಮ್ಯ ಮಾತನಾಡಿ ಮುಳಿಯ ಜ್ಯುವೆಲ್ಸ್ ವ್ಯಾಪಾರ ವ್ಯವಹಾರವಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ. ಇಂತಹ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿ ಎಂದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮಾ, ಶಾಖಾ ಪ್ರಬಂಧಕರಾದ ಅಶೋಕ್.ಡಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್. ಪ್ರೊಕ್ಯೂರ್‍ಮೆಂಟ್ ಮ್ಯಾನೇಜರ್ ಲೋಕೇಶ್ ಹಾಗೂ ಮುಳಿಯ ಜ್ಯುವೆಲ್ಸ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಹಕರ ಕೈಗೆಟಕುವ ರೀತಿಯಲ್ಲಿರುವ ಡೈಮಂಡ್ ಫೆಸ್ಟ್, ಹೆಸರಿನಂತೆ . ಮಾತ್ರವಲ್ಲ ಗ್ರಾಹಕರಿಗಾಗಿ, ವಿಶೇಷ ಆಫರ್, ಗಿಫ್ಟ್’ಗಳನ್ನು ನೀಡಲಾಗಿದೆ.

ಡೈಮಂಡ್ ಉಂಗುರ ಗೆಲ್ಲುವ ಅವಕಾಶದ ಜೊತೆಗೆ ನಿಮ್ಮ ಹಳೆ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ. ಇದರಲ್ಲಿ ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಪಡೆಯುವ ಸುವರ್ಣಾವಕಾಶ ಗ್ರಾಹಕರಿಗಿದೆ.


ಸಿಬ್ಬಂದಿ ಜಯಲಕ್ಷೀ ಪ್ರಾರ್ಥಿಸಿ, ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿ, ಸಿಬ್ಬಂದಿ ದಿನೇಶ್ ಕುಮಾರ್ ವಂದಿಸಿದರು.

Related posts

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!