26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಸೆ.18ರಿಂದ ಅ.5 ರವರೆಗೆ ನಡೆಯುವ ಕಿಸ್ನ ಹಾಗೂ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆಯು ಸೆ.19 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಸೌಮ್ಯ ಜಯಂತ್ ಭಾಗವಹಿಸಿದ್ದರು.

ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ ಮಾತನಾಡಿ, ಗುಣಮಟ್ಟಕ್ಕೆ, ವಿನ್ಯಾಸ ಎಲ್ಲದರಲ್ಲೂ ಮುಳಿಯ ಜ್ಯುವೆಲ್ಸ್ ಎತ್ತಿದ ಕೈ, ಮುಳಿಯವು ಬೆಳ್ತಂಗಡಿಯಲ್ಲಿ ಮನೆಮಾತಾಗಿದ್ದು, 365 ದಿನವೂ ಇಲ್ಲಿ ಹಬ್ಬದಂತೆ ವ್ಯಾಪಾರ ನಡೆಯಲಿ ಎಂದು ಶುಭಹಾರೈಸಿದರು.


ಜಿ. ಪಂ. ಮಾಜಿ ಸದಸ್ಯೆ ಶ್ರೀಮತಿ ಸೌಮ್ಯ ಮಾತನಾಡಿ ಮುಳಿಯ ಜ್ಯುವೆಲ್ಸ್ ವ್ಯಾಪಾರ ವ್ಯವಹಾರವಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ. ಇಂತಹ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿ ಎಂದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮಾ, ಶಾಖಾ ಪ್ರಬಂಧಕರಾದ ಅಶೋಕ್.ಡಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್. ಪ್ರೊಕ್ಯೂರ್‍ಮೆಂಟ್ ಮ್ಯಾನೇಜರ್ ಲೋಕೇಶ್ ಹಾಗೂ ಮುಳಿಯ ಜ್ಯುವೆಲ್ಸ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಹಕರ ಕೈಗೆಟಕುವ ರೀತಿಯಲ್ಲಿರುವ ಡೈಮಂಡ್ ಫೆಸ್ಟ್, ಹೆಸರಿನಂತೆ . ಮಾತ್ರವಲ್ಲ ಗ್ರಾಹಕರಿಗಾಗಿ, ವಿಶೇಷ ಆಫರ್, ಗಿಫ್ಟ್’ಗಳನ್ನು ನೀಡಲಾಗಿದೆ.

ಡೈಮಂಡ್ ಉಂಗುರ ಗೆಲ್ಲುವ ಅವಕಾಶದ ಜೊತೆಗೆ ನಿಮ್ಮ ಹಳೆ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ. ಇದರಲ್ಲಿ ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಪಡೆಯುವ ಸುವರ್ಣಾವಕಾಶ ಗ್ರಾಹಕರಿಗಿದೆ.


ಸಿಬ್ಬಂದಿ ಜಯಲಕ್ಷೀ ಪ್ರಾರ್ಥಿಸಿ, ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿ, ಸಿಬ್ಬಂದಿ ದಿನೇಶ್ ಕುಮಾರ್ ವಂದಿಸಿದರು.

Related posts

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!