30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್‌ ಕುಮಾರ್‌ ಚಾಲನೆ ನೀಡಿ, ಗರಿಷ್ಠ ಸಹಕಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಕರುಣಾಕರ ಆಚಾರ್ಯ, ಹಿರಿಯ ಕೃಷಿಕ ರತನ್ ಕುಮಾರ್, ಕಲಂಜ ಗ್ರಾಪಂ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲಂಜ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ವಸಂತ ಮಡಿವಾಳ, ದರ್ಣಪ್ಪ ಪೂಜಾರಿ, ಚೆನ್ನಪ್ಪಗೌಡ, ಮುಖ್ಯ ಶಿಕ್ಷಕಿ ಪೂರ್ಣಿಮಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya
error: Content is protected !!