25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಅರಸಿನಮಕ್ಕಿ: ಸಮೂಹ ಸಂಪನ್ಮೂಲ ಕೇಂದ್ರ ಪೆರ್ಲ, ಇದರ ಪ್ರಾಥಮಿಕ ಶಾಲಾ ವಿಭಾಗದ 2023-24 ರ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸತತ 2ನೇ ಬಾರಿ ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗ :ಅದ್ವಿತಿ 6ನೇ ಧಾರ್ಮಿಕ ಪಠಣ ಹಾಗೂ ಲಘು ಸಂಗೀತದಲ್ಲಿ ಪ್ರಥಮ, ರಕ್ಷಿತಾ 7ನೇ ಹಿಂದಿ ಕಂಠಪಾಠ ಪ್ರಥಮ, ಚೈತ್ರೇಶ್ 6ನೇ ಮಿಮಿಕ್ರಿಯಲ್ಲಿ ಪ್ರಥಮ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ, ನಿವೇದಿತಾ 6ನೇ ಛದ್ಮವೇಷ ದಲ್ಲಿ ಪ್ರಥಮ ಹಾಗೂ ಭಕ್ತಿಗೀತೆಯಲ್ಲಿ ತೃತೀಯ, ಚೇತನಾ ಕವನ ವಾಚನದಲ್ಲಿ ಪ್ರಥಮ ಶ್ರಾವ್ಯ7ನೇ ಕಥೆ ಹೇಳುವುದು ಹಾಗೂ ಇಂಗ್ಲೀಷ್ ಕಂಠಪಾಠದಲ್ಲಿ ದ್ವಿತೀಯ, ಪ್ರಣಮ್ಯ 6ನೇ ಕನ್ನಡ ಕಂಠಪಾಠದಲ್ಲಿ ತೃತೀಯ ಸಿಂಚನಾ 6ನೇ ಅಭಿನಯ ಗೀತೆಯಲ್ಲಿ ತೃತೀಯ, ಕಿರಣ್ 6ನೇ ಪ್ಲೇ ಮಾಡೆಲಿಂಗ್ ತೃತೀಯ.

ಕಿರಿಯ ವಿಭಾಗ; ಕೀರ್ತನಾ 4ನೇ ಚಿತ್ರಕಲೆಯಲ್ಲಿ ಪ್ರಥಮ, ಭವಿಷ್ 3ನೇ ಛದ್ಮವೇಷದಲ್ಲಿ ದ್ವಿತೀಯ, ಅನುಷ್ಕಾ 2ನೇ ಅಭಿನಯ ಗೀತೆಯಲ್ಲಿ ದ್ವಿತೀಯ, ಗ್ರೀಷ್ಮ 4ನೇ ಕಥೆ ಹೇಳುವುದರಲ್ಲಿ ತೃತೀಯ, ಶಿವಾನಿ ಜೆ. ಎಸ್ 3 ನೇ ಭಕ್ತಿ ಗೀತೆಯಲ್ಲಿ ತೃತೀಯ, ಸ್ಕಂದ 1ನೇ ಲಘು ಸಂಗೀತ ದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಸಂಚಾಲಕರಾದ ವಾಮನ್ ತಾಮಡ್ಕರ್ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಯ ಅಧ್ಯಕ್ಷ ಉಪೇಂದ್ರ ರವರು ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ಹಾಗೂ ತಾಲೂಕು ಮಟ್ಟದಲ್ಲಿ ಸ್ಪರ್ಧಿಸಲಿರುವ ಅದ್ವಿತಿ, ರಕ್ಷಿತಾ, ನಿವೇದಿತಾ, ಚೈತ್ರೇಶ್, ಚೇತನಾ, ಕೀರ್ತನಾ ರವರನ್ನು ಶುಭ ಹಾರೈಸಿದರು, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ, ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಲಕ್ಷ್ಮೀ, ಶ್ರೀಮತಿ ದಿವ್ಯಶ್ರೀ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸಂಧ್ಯಾ ಹಾಗೂ ನಮ್ಮ ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ ಸಂತೋಷ್ ಗೋಖಲೆಯವರು ಮಾರ್ಗದರ್ಶನವನ್ನು ನೀಡಿದ್ದಾರೆ.

Related posts

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya
error: Content is protected !!