ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಬೆಳಾಲು: ಇಲ್ಲಿನ ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಬೆಳಾಲು ವತಿಯಿಂದ ನರೇಗಾ ಯೋಜನೆಯಡಿ 6.35 ಲಕ್ಷ ರೂ ವೆಚ್ಚದಲ್ಲಿ ಹಾಗೂ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ 2 ಲಕ್ಷ ರೂ ವೆಚ್ಚದಲ್ಲಿ ಒಟ್ಟು 8.35 ಲಕ್ಷ ರೂ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಸೆ.21 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾಯಾ ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್ ಎಳ್ಳುಗದ್ದೆ, ಕೃಷ್ಣಯ್ಯ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರೂ ಆದ ಗ್ರಾ.ಪಂ. ಸದಸ್ಯ ಸುರೇಂದ್ರ ಗೌಡ ಸುರುಳಿ, ಎಸ್.ಡಿ.ಎಂ.ಸಿ ಸದಸ್ಯರಾದ ಮೋಹನ್ ಗೌಡ, ಹಕ್ಕಿಂ, ಪ್ರಭಾಕರ್, ಶಶಿಕಲಾ, ನಿರ್ಮಲ ಹಾಗೂ ಮಾಯಾ ಫ್ರೆಂಡ್ಸ್‌ ಅಧ್ಯಕ್ಷ ರಾಧಾಕೃಷ್ಣ ಗೌಡ, ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ ಶಿಕ್ಷಕರಾದ ಜಾನ್ಸಿ ಸಿ.ವಿ, ಅತಿಥಿ ಶಿಕ್ಷಕರಾದ ಪ್ರಜ್ಞಾ, ಗುರುಪ್ರಸನ್ನ, ಗೌರವ ಶಿಕ್ಷಕಿಯಾದ ಯಶಸ್ವಿನಿ, ಹಾಗೂ ಊರಿನ ಪೋಷಕರು, ವಿದ್ಯಾ ಅಭಿಮಾನಿಗಳು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!