25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

ಬೆಳ್ತಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ನಮ್ಮ ಶಾಲೆಯಲ್ಲಿ ಇದು ಪ್ರಥಮ ವರ್ಷದ ಗಣೇಶೋತ್ಸವನ್ನು ಆಚರಣೆ ಮಾಡುತ್ತಿದ್ದೇವೆ. ವಸತಿ ಶಾಲೆಯ ಮಕ್ಕಳು ಮತ್ತು ನಮ್ಮ ಶಾಲೆಯ ಸಿಬ್ಬಂದಿ ರಾಧಕೃಷ್ಣ ಮತ್ತು ಶಿಕ್ಷಕ ಸುಧೀರ್ ಇವರು ಕೇವಲ ಎರಡೇ ದಿನಗಳಲ್ಲಿ ಗಣೇಶನ ಸುಂದರವಾದ ಮೂರ್ತಿಯನ್ನು ರಚನೆ ಮಾಡಿದರು. ಮಕ್ಕಳಿಗೆ ಹಬ್ಬದ ಮಹತ್ವ ಮತ್ತು ಶಾಲೆಯಲ್ಲಿ ಕೂಡ ಹಬ್ಬದ ವಿಜೃಂಭಣೆ ಇರಲಿ ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸಲಾಯಿತು.

ಗಣೇಶೋತ್ಸವದ ಅಂಗವಾಗಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಂದ ಕುಣಿತ ಭಜನೆ , ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮದೊಂದಿಗೆ ನೆರವೇರಿತು. ಗಣೇಶೋತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳು ಸೀತಾರಾಮ ರೈ ಮಕ್ಕಳಿಗೆ ಶುಭ ಹಾರೈಸಿದರು.

ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪಂಚಾಯತ್ ಸದಸ್ಯರು, ಹಾಗೂ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿ, ವಸತಿ ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕ್ರೀಡಾ ತರಬೇತುದಾರರು ಜಯಂತ್ ಶೆಟ್ಟಿ ಸಹಕಾರದೊಂದಿಗೆ ಸಂಜೆ 5.00 ಗಂಟೆಗೆ ಗಣೇಶನ ಮೂರ್ತಿಯ ಭವ್ಯ ಮೆರವಣಿಗೆಯು ಪಾಲ್ಗುಣಿ ನದಿಯಲ್ಲಿ ಜಲಸ್ತಂಭನದೊಂದಿಗೆ ಮುಕ್ತಾಯಗೊಂಡಿತು.

Related posts

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!