April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

ಬೆಳ್ತಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ನಮ್ಮ ಶಾಲೆಯಲ್ಲಿ ಇದು ಪ್ರಥಮ ವರ್ಷದ ಗಣೇಶೋತ್ಸವನ್ನು ಆಚರಣೆ ಮಾಡುತ್ತಿದ್ದೇವೆ. ವಸತಿ ಶಾಲೆಯ ಮಕ್ಕಳು ಮತ್ತು ನಮ್ಮ ಶಾಲೆಯ ಸಿಬ್ಬಂದಿ ರಾಧಕೃಷ್ಣ ಮತ್ತು ಶಿಕ್ಷಕ ಸುಧೀರ್ ಇವರು ಕೇವಲ ಎರಡೇ ದಿನಗಳಲ್ಲಿ ಗಣೇಶನ ಸುಂದರವಾದ ಮೂರ್ತಿಯನ್ನು ರಚನೆ ಮಾಡಿದರು. ಮಕ್ಕಳಿಗೆ ಹಬ್ಬದ ಮಹತ್ವ ಮತ್ತು ಶಾಲೆಯಲ್ಲಿ ಕೂಡ ಹಬ್ಬದ ವಿಜೃಂಭಣೆ ಇರಲಿ ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸಲಾಯಿತು.

ಗಣೇಶೋತ್ಸವದ ಅಂಗವಾಗಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಂದ ಕುಣಿತ ಭಜನೆ , ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮದೊಂದಿಗೆ ನೆರವೇರಿತು. ಗಣೇಶೋತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳು ಸೀತಾರಾಮ ರೈ ಮಕ್ಕಳಿಗೆ ಶುಭ ಹಾರೈಸಿದರು.

ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪಂಚಾಯತ್ ಸದಸ್ಯರು, ಹಾಗೂ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿ, ವಸತಿ ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕ್ರೀಡಾ ತರಬೇತುದಾರರು ಜಯಂತ್ ಶೆಟ್ಟಿ ಸಹಕಾರದೊಂದಿಗೆ ಸಂಜೆ 5.00 ಗಂಟೆಗೆ ಗಣೇಶನ ಮೂರ್ತಿಯ ಭವ್ಯ ಮೆರವಣಿಗೆಯು ಪಾಲ್ಗುಣಿ ನದಿಯಲ್ಲಿ ಜಲಸ್ತಂಭನದೊಂದಿಗೆ ಮುಕ್ತಾಯಗೊಂಡಿತು.

Related posts

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya
error: Content is protected !!