25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಅರಸಿನಮಕ್ಕಿ: ಸಮೂಹ ಸಂಪನ್ಮೂಲ ಕೇಂದ್ರ ಪೆರ್ಲ, ಇದರ ಪ್ರಾಥಮಿಕ ಶಾಲಾ ವಿಭಾಗದ 2023-24 ರ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸತತ 2ನೇ ಬಾರಿ ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗ :ಅದ್ವಿತಿ 6ನೇ ಧಾರ್ಮಿಕ ಪಠಣ ಹಾಗೂ ಲಘು ಸಂಗೀತದಲ್ಲಿ ಪ್ರಥಮ, ರಕ್ಷಿತಾ 7ನೇ ಹಿಂದಿ ಕಂಠಪಾಠ ಪ್ರಥಮ, ಚೈತ್ರೇಶ್ 6ನೇ ಮಿಮಿಕ್ರಿಯಲ್ಲಿ ಪ್ರಥಮ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ, ನಿವೇದಿತಾ 6ನೇ ಛದ್ಮವೇಷ ದಲ್ಲಿ ಪ್ರಥಮ ಹಾಗೂ ಭಕ್ತಿಗೀತೆಯಲ್ಲಿ ತೃತೀಯ, ಚೇತನಾ ಕವನ ವಾಚನದಲ್ಲಿ ಪ್ರಥಮ ಶ್ರಾವ್ಯ7ನೇ ಕಥೆ ಹೇಳುವುದು ಹಾಗೂ ಇಂಗ್ಲೀಷ್ ಕಂಠಪಾಠದಲ್ಲಿ ದ್ವಿತೀಯ, ಪ್ರಣಮ್ಯ 6ನೇ ಕನ್ನಡ ಕಂಠಪಾಠದಲ್ಲಿ ತೃತೀಯ ಸಿಂಚನಾ 6ನೇ ಅಭಿನಯ ಗೀತೆಯಲ್ಲಿ ತೃತೀಯ, ಕಿರಣ್ 6ನೇ ಪ್ಲೇ ಮಾಡೆಲಿಂಗ್ ತೃತೀಯ.

ಕಿರಿಯ ವಿಭಾಗ; ಕೀರ್ತನಾ 4ನೇ ಚಿತ್ರಕಲೆಯಲ್ಲಿ ಪ್ರಥಮ, ಭವಿಷ್ 3ನೇ ಛದ್ಮವೇಷದಲ್ಲಿ ದ್ವಿತೀಯ, ಅನುಷ್ಕಾ 2ನೇ ಅಭಿನಯ ಗೀತೆಯಲ್ಲಿ ದ್ವಿತೀಯ, ಗ್ರೀಷ್ಮ 4ನೇ ಕಥೆ ಹೇಳುವುದರಲ್ಲಿ ತೃತೀಯ, ಶಿವಾನಿ ಜೆ. ಎಸ್ 3 ನೇ ಭಕ್ತಿ ಗೀತೆಯಲ್ಲಿ ತೃತೀಯ, ಸ್ಕಂದ 1ನೇ ಲಘು ಸಂಗೀತ ದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಸಂಚಾಲಕರಾದ ವಾಮನ್ ತಾಮಡ್ಕರ್ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಯ ಅಧ್ಯಕ್ಷ ಉಪೇಂದ್ರ ರವರು ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ಹಾಗೂ ತಾಲೂಕು ಮಟ್ಟದಲ್ಲಿ ಸ್ಪರ್ಧಿಸಲಿರುವ ಅದ್ವಿತಿ, ರಕ್ಷಿತಾ, ನಿವೇದಿತಾ, ಚೈತ್ರೇಶ್, ಚೇತನಾ, ಕೀರ್ತನಾ ರವರನ್ನು ಶುಭ ಹಾರೈಸಿದರು, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ, ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಲಕ್ಷ್ಮೀ, ಶ್ರೀಮತಿ ದಿವ್ಯಶ್ರೀ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸಂಧ್ಯಾ ಹಾಗೂ ನಮ್ಮ ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ ಸಂತೋಷ್ ಗೋಖಲೆಯವರು ಮಾರ್ಗದರ್ಶನವನ್ನು ನೀಡಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!