23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಅರಸಿನಮಕ್ಕಿ: ಸಮೂಹ ಸಂಪನ್ಮೂಲ ಕೇಂದ್ರ ಪೆರ್ಲ, ಇದರ ಪ್ರಾಥಮಿಕ ಶಾಲಾ ವಿಭಾಗದ 2023-24 ರ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸತತ 2ನೇ ಬಾರಿ ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗ :ಅದ್ವಿತಿ 6ನೇ ಧಾರ್ಮಿಕ ಪಠಣ ಹಾಗೂ ಲಘು ಸಂಗೀತದಲ್ಲಿ ಪ್ರಥಮ, ರಕ್ಷಿತಾ 7ನೇ ಹಿಂದಿ ಕಂಠಪಾಠ ಪ್ರಥಮ, ಚೈತ್ರೇಶ್ 6ನೇ ಮಿಮಿಕ್ರಿಯಲ್ಲಿ ಪ್ರಥಮ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ, ನಿವೇದಿತಾ 6ನೇ ಛದ್ಮವೇಷ ದಲ್ಲಿ ಪ್ರಥಮ ಹಾಗೂ ಭಕ್ತಿಗೀತೆಯಲ್ಲಿ ತೃತೀಯ, ಚೇತನಾ ಕವನ ವಾಚನದಲ್ಲಿ ಪ್ರಥಮ ಶ್ರಾವ್ಯ7ನೇ ಕಥೆ ಹೇಳುವುದು ಹಾಗೂ ಇಂಗ್ಲೀಷ್ ಕಂಠಪಾಠದಲ್ಲಿ ದ್ವಿತೀಯ, ಪ್ರಣಮ್ಯ 6ನೇ ಕನ್ನಡ ಕಂಠಪಾಠದಲ್ಲಿ ತೃತೀಯ ಸಿಂಚನಾ 6ನೇ ಅಭಿನಯ ಗೀತೆಯಲ್ಲಿ ತೃತೀಯ, ಕಿರಣ್ 6ನೇ ಪ್ಲೇ ಮಾಡೆಲಿಂಗ್ ತೃತೀಯ.

ಕಿರಿಯ ವಿಭಾಗ; ಕೀರ್ತನಾ 4ನೇ ಚಿತ್ರಕಲೆಯಲ್ಲಿ ಪ್ರಥಮ, ಭವಿಷ್ 3ನೇ ಛದ್ಮವೇಷದಲ್ಲಿ ದ್ವಿತೀಯ, ಅನುಷ್ಕಾ 2ನೇ ಅಭಿನಯ ಗೀತೆಯಲ್ಲಿ ದ್ವಿತೀಯ, ಗ್ರೀಷ್ಮ 4ನೇ ಕಥೆ ಹೇಳುವುದರಲ್ಲಿ ತೃತೀಯ, ಶಿವಾನಿ ಜೆ. ಎಸ್ 3 ನೇ ಭಕ್ತಿ ಗೀತೆಯಲ್ಲಿ ತೃತೀಯ, ಸ್ಕಂದ 1ನೇ ಲಘು ಸಂಗೀತ ದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಸಂಚಾಲಕರಾದ ವಾಮನ್ ತಾಮಡ್ಕರ್ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಯ ಅಧ್ಯಕ್ಷ ಉಪೇಂದ್ರ ರವರು ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ಹಾಗೂ ತಾಲೂಕು ಮಟ್ಟದಲ್ಲಿ ಸ್ಪರ್ಧಿಸಲಿರುವ ಅದ್ವಿತಿ, ರಕ್ಷಿತಾ, ನಿವೇದಿತಾ, ಚೈತ್ರೇಶ್, ಚೇತನಾ, ಕೀರ್ತನಾ ರವರನ್ನು ಶುಭ ಹಾರೈಸಿದರು, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ, ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಲಕ್ಷ್ಮೀ, ಶ್ರೀಮತಿ ದಿವ್ಯಶ್ರೀ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸಂಧ್ಯಾ ಹಾಗೂ ನಮ್ಮ ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ ಸಂತೋಷ್ ಗೋಖಲೆಯವರು ಮಾರ್ಗದರ್ಶನವನ್ನು ನೀಡಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!