23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ವಿವಿದೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ, ಶಿಬಾಜೆ, ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಚಾರ್ಮಾಡಿ, ನೆರಿಯ, ಪುದುವೆಟ್ಟು ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿಯ ಕೃಷಿ ನಷ್ಟ ಅನುಭವಿಸಿದ್ದಾರೆ. ಕಾಡಾನೆಗಳ ಉಪಟಳದಿಂದಾಗಿ ಸಂಜೆಯ ನಂತರ ಮನೆಯಿಂದ ಹೊರಗೆ ಬರದಂತಾಗಿದೆ.ಕಾಡಾನೆಗಳನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆಗೆ ಸರ್ಕಾರ ನಿರ್ದೇಶನ ನೀಡಬೇಕು. ಮತ್ತು ಆ್ಯಂಟಿ ಡಿಪ್ರೆಡೇಷನ್ ಕ್ಯಾಂಪ್ ನ್ನು ತುರ್ತಾಗಿ ರಚಿಸಿ ಸಿಬ್ಬಂದಿಯನ್ನು ನೇಮಕ ಮಾಡಿ ಗಸ್ತು ತಿರುಗಲು ವಾಹನದ ವ್ಯವಸ್ಥೆಯನ್ನು ಮಾಡಬೇಕೆಂದು ಸಚಿವರಿಗೆ ರಕ್ಷಿತ್ ಶಿವರಾಂ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಉಪಸ್ಥಿತರಿದ್ದರು.

Related posts

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!