22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ವಿವಿದೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ, ಶಿಬಾಜೆ, ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಚಾರ್ಮಾಡಿ, ನೆರಿಯ, ಪುದುವೆಟ್ಟು ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿಯ ಕೃಷಿ ನಷ್ಟ ಅನುಭವಿಸಿದ್ದಾರೆ. ಕಾಡಾನೆಗಳ ಉಪಟಳದಿಂದಾಗಿ ಸಂಜೆಯ ನಂತರ ಮನೆಯಿಂದ ಹೊರಗೆ ಬರದಂತಾಗಿದೆ.ಕಾಡಾನೆಗಳನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆಗೆ ಸರ್ಕಾರ ನಿರ್ದೇಶನ ನೀಡಬೇಕು. ಮತ್ತು ಆ್ಯಂಟಿ ಡಿಪ್ರೆಡೇಷನ್ ಕ್ಯಾಂಪ್ ನ್ನು ತುರ್ತಾಗಿ ರಚಿಸಿ ಸಿಬ್ಬಂದಿಯನ್ನು ನೇಮಕ ಮಾಡಿ ಗಸ್ತು ತಿರುಗಲು ವಾಹನದ ವ್ಯವಸ್ಥೆಯನ್ನು ಮಾಡಬೇಕೆಂದು ಸಚಿವರಿಗೆ ರಕ್ಷಿತ್ ಶಿವರಾಂ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!