September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ವಿವಿದೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ, ಶಿಬಾಜೆ, ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಚಾರ್ಮಾಡಿ, ನೆರಿಯ, ಪುದುವೆಟ್ಟು ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿಯ ಕೃಷಿ ನಷ್ಟ ಅನುಭವಿಸಿದ್ದಾರೆ. ಕಾಡಾನೆಗಳ ಉಪಟಳದಿಂದಾಗಿ ಸಂಜೆಯ ನಂತರ ಮನೆಯಿಂದ ಹೊರಗೆ ಬರದಂತಾಗಿದೆ.ಕಾಡಾನೆಗಳನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆಗೆ ಸರ್ಕಾರ ನಿರ್ದೇಶನ ನೀಡಬೇಕು. ಮತ್ತು ಆ್ಯಂಟಿ ಡಿಪ್ರೆಡೇಷನ್ ಕ್ಯಾಂಪ್ ನ್ನು ತುರ್ತಾಗಿ ರಚಿಸಿ ಸಿಬ್ಬಂದಿಯನ್ನು ನೇಮಕ ಮಾಡಿ ಗಸ್ತು ತಿರುಗಲು ವಾಹನದ ವ್ಯವಸ್ಥೆಯನ್ನು ಮಾಡಬೇಕೆಂದು ಸಚಿವರಿಗೆ ರಕ್ಷಿತ್ ಶಿವರಾಂ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಉಪಸ್ಥಿತರಿದ್ದರು.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!