25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಈ ದಿನ ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಭಕ್ಷತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ ಹಾಗೂ ಸ್ವಚ್ಛತಾ ನೌಕರರನ್ನು ಸನ್ಮಾನಿಸಲಾಯಿತು ಹಾಗೂ ವಸ್ತ್ರ ವಿತರಣೆ ಮಾಡಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು. ಗ್ರಾಮದ ಸ್ವಚ್ಛತೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ನೌಕರರಿಗೆ ಪಂಚಾಯತಿ ಉಪಾಧ್ಯಕ್ಷರಾದ ಪಿ. ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಶ್ರೀಮತಿ ಆನ್ಸಿ ಮೇರಿ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!