23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪ್ರೀಮತ್ ಡಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಾಧನಾ ಕಟ್ಟಡದ ಅಟಲ್ ಜೀ ಸಭಾಭವನದಲ್ಲಿ ನಡೆಸಲಾಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.366 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.1ಕೋಟಿ64 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಪ್ರೀತಮ್ ಡಿ ಸದಸ್ಯರಿಗೆ 16% ಡಿವಿಡೆಂಟ್ ಘೋಷಿಸಿದರು.

ಸಂಘವು ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ.ಸಂಘವು ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ ಎಂದರು‌.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಅಜಿತ್ ಕುಮಾರ್ ಜೈನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್.ಸತೀಶ್ ಹೊಳ್ಳ, ನಿರ್ದೇಶಕರಾದ ಶ್ರೀಮತಿ ಶಾಂಭವಿ ರೈ, ಉಮಾನಾಥ, ಶೀನ, ಶ್ರೀಮತಿ ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ನಿರ್ದೇಶಕಿ ಧನಲಕ್ಷ್ಮಿ ಜನಾರ್ದನ್ ಸ್ವಾಗತಿಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್.ಸತೀಶ್ ಹೊಳ್ಳ ವರದಿ ಮಂಡಿಸಿದರು. ಲೋಕೇಶ್ ಶೆಟ್ಟಿ ಎ.ಎಸ್ ಕಾರ್ಯಕ್ರಮ‌ ನಿರೂಪಿಸಿದರು.ಸಂಘದ ನೌಕರ ವೃಂದದವರು ಸಹಕರಿಸಿದರು.

ಸಾಧಕರಿಗೆ ಸನ್ಮಾನ:
ಸಂಘದ ಹಿರಿಯ ಸಹಕಾರಿ ಬಂಧುಗಳಾದ ಸದಾನಂದಯ್ಯ,ರಾಘವ ಹೆಬ್ಬಾರ್ ಎಮ್,ನಾರಾಯಣ ಪೂಜಾರಿ,ಪಾಪಚ್ಚನ್.ಕೆ.ಪಿ,ಮಂಜುನಾಥ ಡಿ,ಧರ್ಣಮ್ಮ,ರಮೇಶ್ ಪ್ರಭು,ಕೃಷ್ಣ ಭಟ್ ಎಮ್,ಮಂಜುನಾಥ ಡಿ.ಎಸ್,ನಾಗೇಶ್ ರಾವ್ ಎಮ್,ಕೊರಗಪ್ಪ ಎಮ್ ಕೆ,ಪಾರ್ಶ್ವನಾಥ ಜೈನ್,ಮಾಯಿಲರವರನ್ನು ಸನ್ಮಾನಿಸಲಾಯಿತು . ಕೃಷಿ ಮತ್ತು ಇತರ ಕ್ಷೇತ್ರದಲ್ಲಿ ಸಾಧನೆಗೈದ ಸದಸ್ಯರಾದ ಶ್ರೀಕಾಂತ್ ರಾವ್,ವೆಂಕಪ್ಪ ಪೂಜಾರಿ,ಬಾಬು ಎಂ.ಕೆ,ರೂಪೇಶ್ ಇವರಿಗೆ ಗೌರವ ಪುರಸ್ಕಾರ 2023 ನೀಡ ಸನ್ಮಾನಿಸಲಾಯಿತು.ಅತೀ ಹೆಚ್ಚು ಠೇವಣಿ ಸಂಗ್ರಹಗಾರರಾದ ಗೀರೀಶ್ ಶೆಟ್ಟಿ, ವೆಂಕಪ್ಪ ಗೌಡ,ಪ್ರೇಮ ಆರ್ ಶೆಟ್ಟಿ ಹಾಗೂ ಸಂಘದ ಹಿರಿಯ ಸಿಬ್ಬಂದಿ ರವಿ ಕುಮಾರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!