September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾಲತರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಸುಧಾಕರ ಮಜಲು, ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಸೋಮಪ್ಪ ಗೌಡ ಕುಬಾಯ, ಅಶೋಕ್ ರಾಯಿಮಾರು, ಶ್ರೀಮತಿ ಸೌಭಾಗ್ಯ ರಾಜೇಶ್ ಪಿಜಿನುಕ್ಕು, ಶ್ರೀಮತಿ ರೀತ ಚಂದ್ರಶೇಖರ್, ಆಶಾ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ನಾಗವೇಣಿ ರಕ್ತೇಶ್ವರಿ ಪದವು ಮತ್ತು ಹಿರಿಯ ನಾಗರಿಕರಾದ ಶ್ರೀಮತಿ ಅಲಿ ಮಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾಳ ಅಂಗನವಾಡಿ ಕಾರ್ಯ ವ್ಯಾಪ್ತಿಯ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಪೌಷ್ಟಿಕಾಂಶ ಆಹಾರದ ಬಗ್ಗೆ ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ ಮಾಹಿತಿ ನೀಡಿದರು. ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತಂದಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಶ್ರೀಮತಿ ನವೀನ ಕುಮಾರಿ ಸಹಾಯಕಿ ಶ್ರೀಮತಿ ಮೋಹಿನಿ ಸಹಕರಿಸಿದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಮತಿ ಶಶಿಕಲ ಇವರು ಅತಿಥಿಗಳನು ಸ್ವಾಗತಿಸಿ ಕೊನೆಯದಾಗಿ ಧನ್ಯವಾದ ಮಾಡಿದರು.

Related posts

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!