24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

ಬೆಳ್ತಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ನಮ್ಮ ಶಾಲೆಯಲ್ಲಿ ಇದು ಪ್ರಥಮ ವರ್ಷದ ಗಣೇಶೋತ್ಸವನ್ನು ಆಚರಣೆ ಮಾಡುತ್ತಿದ್ದೇವೆ. ವಸತಿ ಶಾಲೆಯ ಮಕ್ಕಳು ಮತ್ತು ನಮ್ಮ ಶಾಲೆಯ ಸಿಬ್ಬಂದಿ ರಾಧಕೃಷ್ಣ ಮತ್ತು ಶಿಕ್ಷಕ ಸುಧೀರ್ ಇವರು ಕೇವಲ ಎರಡೇ ದಿನಗಳಲ್ಲಿ ಗಣೇಶನ ಸುಂದರವಾದ ಮೂರ್ತಿಯನ್ನು ರಚನೆ ಮಾಡಿದರು. ಮಕ್ಕಳಿಗೆ ಹಬ್ಬದ ಮಹತ್ವ ಮತ್ತು ಶಾಲೆಯಲ್ಲಿ ಕೂಡ ಹಬ್ಬದ ವಿಜೃಂಭಣೆ ಇರಲಿ ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸಲಾಯಿತು.

ಗಣೇಶೋತ್ಸವದ ಅಂಗವಾಗಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಂದ ಕುಣಿತ ಭಜನೆ , ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮದೊಂದಿಗೆ ನೆರವೇರಿತು. ಗಣೇಶೋತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳು ಸೀತಾರಾಮ ರೈ ಮಕ್ಕಳಿಗೆ ಶುಭ ಹಾರೈಸಿದರು.

ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪಂಚಾಯತ್ ಸದಸ್ಯರು, ಹಾಗೂ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿ, ವಸತಿ ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕ್ರೀಡಾ ತರಬೇತುದಾರರು ಜಯಂತ್ ಶೆಟ್ಟಿ ಸಹಕಾರದೊಂದಿಗೆ ಸಂಜೆ 5.00 ಗಂಟೆಗೆ ಗಣೇಶನ ಮೂರ್ತಿಯ ಭವ್ಯ ಮೆರವಣಿಗೆಯು ಪಾಲ್ಗುಣಿ ನದಿಯಲ್ಲಿ ಜಲಸ್ತಂಭನದೊಂದಿಗೆ ಮುಕ್ತಾಯಗೊಂಡಿತು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!