July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಅರಸಿನಮಕ್ಕಿ: ಸಮೂಹ ಸಂಪನ್ಮೂಲ ಕೇಂದ್ರ ಪೆರ್ಲ, ಇದರ ಪ್ರಾಥಮಿಕ ಶಾಲಾ ವಿಭಾಗದ 2023-24 ರ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸತತ 2ನೇ ಬಾರಿ ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗ :ಅದ್ವಿತಿ 6ನೇ ಧಾರ್ಮಿಕ ಪಠಣ ಹಾಗೂ ಲಘು ಸಂಗೀತದಲ್ಲಿ ಪ್ರಥಮ, ರಕ್ಷಿತಾ 7ನೇ ಹಿಂದಿ ಕಂಠಪಾಠ ಪ್ರಥಮ, ಚೈತ್ರೇಶ್ 6ನೇ ಮಿಮಿಕ್ರಿಯಲ್ಲಿ ಪ್ರಥಮ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ, ನಿವೇದಿತಾ 6ನೇ ಛದ್ಮವೇಷ ದಲ್ಲಿ ಪ್ರಥಮ ಹಾಗೂ ಭಕ್ತಿಗೀತೆಯಲ್ಲಿ ತೃತೀಯ, ಚೇತನಾ ಕವನ ವಾಚನದಲ್ಲಿ ಪ್ರಥಮ ಶ್ರಾವ್ಯ7ನೇ ಕಥೆ ಹೇಳುವುದು ಹಾಗೂ ಇಂಗ್ಲೀಷ್ ಕಂಠಪಾಠದಲ್ಲಿ ದ್ವಿತೀಯ, ಪ್ರಣಮ್ಯ 6ನೇ ಕನ್ನಡ ಕಂಠಪಾಠದಲ್ಲಿ ತೃತೀಯ ಸಿಂಚನಾ 6ನೇ ಅಭಿನಯ ಗೀತೆಯಲ್ಲಿ ತೃತೀಯ, ಕಿರಣ್ 6ನೇ ಪ್ಲೇ ಮಾಡೆಲಿಂಗ್ ತೃತೀಯ.

ಕಿರಿಯ ವಿಭಾಗ; ಕೀರ್ತನಾ 4ನೇ ಚಿತ್ರಕಲೆಯಲ್ಲಿ ಪ್ರಥಮ, ಭವಿಷ್ 3ನೇ ಛದ್ಮವೇಷದಲ್ಲಿ ದ್ವಿತೀಯ, ಅನುಷ್ಕಾ 2ನೇ ಅಭಿನಯ ಗೀತೆಯಲ್ಲಿ ದ್ವಿತೀಯ, ಗ್ರೀಷ್ಮ 4ನೇ ಕಥೆ ಹೇಳುವುದರಲ್ಲಿ ತೃತೀಯ, ಶಿವಾನಿ ಜೆ. ಎಸ್ 3 ನೇ ಭಕ್ತಿ ಗೀತೆಯಲ್ಲಿ ತೃತೀಯ, ಸ್ಕಂದ 1ನೇ ಲಘು ಸಂಗೀತ ದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಸಂಚಾಲಕರಾದ ವಾಮನ್ ತಾಮಡ್ಕರ್ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಯ ಅಧ್ಯಕ್ಷ ಉಪೇಂದ್ರ ರವರು ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ಹಾಗೂ ತಾಲೂಕು ಮಟ್ಟದಲ್ಲಿ ಸ್ಪರ್ಧಿಸಲಿರುವ ಅದ್ವಿತಿ, ರಕ್ಷಿತಾ, ನಿವೇದಿತಾ, ಚೈತ್ರೇಶ್, ಚೇತನಾ, ಕೀರ್ತನಾ ರವರನ್ನು ಶುಭ ಹಾರೈಸಿದರು, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ, ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಲಕ್ಷ್ಮೀ, ಶ್ರೀಮತಿ ದಿವ್ಯಶ್ರೀ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸಂಧ್ಯಾ ಹಾಗೂ ನಮ್ಮ ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ ಸಂತೋಷ್ ಗೋಖಲೆಯವರು ಮಾರ್ಗದರ್ಶನವನ್ನು ನೀಡಿದ್ದಾರೆ.

Related posts

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!