26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾಲತರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಸುಧಾಕರ ಮಜಲು, ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಸೋಮಪ್ಪ ಗೌಡ ಕುಬಾಯ, ಅಶೋಕ್ ರಾಯಿಮಾರು, ಶ್ರೀಮತಿ ಸೌಭಾಗ್ಯ ರಾಜೇಶ್ ಪಿಜಿನುಕ್ಕು, ಶ್ರೀಮತಿ ರೀತ ಚಂದ್ರಶೇಖರ್, ಆಶಾ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ನಾಗವೇಣಿ ರಕ್ತೇಶ್ವರಿ ಪದವು ಮತ್ತು ಹಿರಿಯ ನಾಗರಿಕರಾದ ಶ್ರೀಮತಿ ಅಲಿ ಮಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾಳ ಅಂಗನವಾಡಿ ಕಾರ್ಯ ವ್ಯಾಪ್ತಿಯ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಪೌಷ್ಟಿಕಾಂಶ ಆಹಾರದ ಬಗ್ಗೆ ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ ಮಾಹಿತಿ ನೀಡಿದರು. ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತಂದಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಶ್ರೀಮತಿ ನವೀನ ಕುಮಾರಿ ಸಹಾಯಕಿ ಶ್ರೀಮತಿ ಮೋಹಿನಿ ಸಹಕರಿಸಿದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಮತಿ ಶಶಿಕಲ ಇವರು ಅತಿಥಿಗಳನು ಸ್ವಾಗತಿಸಿ ಕೊನೆಯದಾಗಿ ಧನ್ಯವಾದ ಮಾಡಿದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!