23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾಲತರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಸುಧಾಕರ ಮಜಲು, ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಸೋಮಪ್ಪ ಗೌಡ ಕುಬಾಯ, ಅಶೋಕ್ ರಾಯಿಮಾರು, ಶ್ರೀಮತಿ ಸೌಭಾಗ್ಯ ರಾಜೇಶ್ ಪಿಜಿನುಕ್ಕು, ಶ್ರೀಮತಿ ರೀತ ಚಂದ್ರಶೇಖರ್, ಆಶಾ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ನಾಗವೇಣಿ ರಕ್ತೇಶ್ವರಿ ಪದವು ಮತ್ತು ಹಿರಿಯ ನಾಗರಿಕರಾದ ಶ್ರೀಮತಿ ಅಲಿ ಮಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾಳ ಅಂಗನವಾಡಿ ಕಾರ್ಯ ವ್ಯಾಪ್ತಿಯ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಪೌಷ್ಟಿಕಾಂಶ ಆಹಾರದ ಬಗ್ಗೆ ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ ಮಾಹಿತಿ ನೀಡಿದರು. ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತಂದಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಶ್ರೀಮತಿ ನವೀನ ಕುಮಾರಿ ಸಹಾಯಕಿ ಶ್ರೀಮತಿ ಮೋಹಿನಿ ಸಹಕರಿಸಿದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಮತಿ ಶಶಿಕಲ ಇವರು ಅತಿಥಿಗಳನು ಸ್ವಾಗತಿಸಿ ಕೊನೆಯದಾಗಿ ಧನ್ಯವಾದ ಮಾಡಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya
error: Content is protected !!