September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾಲತರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಸುಧಾಕರ ಮಜಲು, ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಸೋಮಪ್ಪ ಗೌಡ ಕುಬಾಯ, ಅಶೋಕ್ ರಾಯಿಮಾರು, ಶ್ರೀಮತಿ ಸೌಭಾಗ್ಯ ರಾಜೇಶ್ ಪಿಜಿನುಕ್ಕು, ಶ್ರೀಮತಿ ರೀತ ಚಂದ್ರಶೇಖರ್, ಆಶಾ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ನಾಗವೇಣಿ ರಕ್ತೇಶ್ವರಿ ಪದವು ಮತ್ತು ಹಿರಿಯ ನಾಗರಿಕರಾದ ಶ್ರೀಮತಿ ಅಲಿ ಮಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾಳ ಅಂಗನವಾಡಿ ಕಾರ್ಯ ವ್ಯಾಪ್ತಿಯ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಪೌಷ್ಟಿಕಾಂಶ ಆಹಾರದ ಬಗ್ಗೆ ವಲಯ ಮೇಲ್ವಿಚಾರಕಿ ಶ್ರೀಮತಿ ನಂದನ ಮಾಹಿತಿ ನೀಡಿದರು. ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತಂದಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತ ಶ್ರೀಮತಿ ಶಶಿಕಲಾ, ಶ್ರೀಮತಿ ನವೀನ ಕುಮಾರಿ ಸಹಾಯಕಿ ಶ್ರೀಮತಿ ಮೋಹಿನಿ ಸಹಕರಿಸಿದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಮತಿ ಶಶಿಕಲ ಇವರು ಅತಿಥಿಗಳನು ಸ್ವಾಗತಿಸಿ ಕೊನೆಯದಾಗಿ ಧನ್ಯವಾದ ಮಾಡಿದರು.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya
error: Content is protected !!