25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ” ಶ್ರೀ ಮಂಜುನಾಥ ದಳ” ದ ಕಬ್ಸ್ , ಬುಲ್ ಬುಲ್ಸ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಬೆಳ್ತಂಗಡಿ ಇವರ ಮಾರ್ಗದರ್ಶನದಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಸಲಹೆ ಮೇರೆಗೆ ವೀರಗಾಥ 3.0 ಆನ್ಲೈನ್ ಸ್ಪರ್ಧೆಯಲ್ಲಿ 9ನೇ ತರಗತಿಯ ಸ್ಕೌಟ್ ವಿದ್ಯಾರ್ಥಿಯಾದ ಆಯುಷ್ ಕೆ. , ಏಳನೇ ತರಗತಿ ಚಿತ್ರಕಲೆ , ಗೈಡ್ ವಿದ್ಯಾರ್ಥಿಯಾದ ಬೃಂದಾ ಎಸ್ 7ನೇ ತರಗತಿ ಚಿತ್ರಕಲೆ, ಗೈಡ್ ವಿದ್ಯಾರ್ಥಿಯಾದ ರಿತಿಕಾ ಶೆಣೈ 7ನೇ ತರಗತಿ ಚಿತ್ರಕಲೆ, ಸ್ಕೌಟ್ ವಿದ್ಯಾರ್ಥಿಯಾದ ಶಾಶ್ವತ್ ಎಸ್ ಕುಮಾರ್ ಎಂಟನೇ ತರಗತಿ ಕವನ ರಚನೆ, ಗೈಡ್ ವಿದ್ಯಾರ್ಥಿಯಾದ ಸಿಂಚನ 9ನೇ ತರಗತಿ ಪ್ರಬಂಧ ಸ್ಪರ್ಧೆ, ಗೈಡ್ ವಿದ್ಯಾರ್ಥಿಯಾದ ಯಶ್ವಿತಾ ಏಳನೇ ತರಗತಿ ಪ್ರಬಂಧ ಸ್ಪರ್ಧೆ, ಬುಲ್ ಬುಲ್ ವಿದ್ಯಾರ್ಥಿಯಾದ ಉನ್ನತಿ ಎಸ್ ನಾಲ್ಕನೇ ತರಗತಿ ಚಿತ್ರಕಲೆ, ಸ್ಕೌಟ್ ವಿದ್ಯಾರ್ಥಿಯಾದ ರಕ್ಷಣ್ ಶೆಟ್ಟಿ 7ನೇ ತರಗತಿ ಕವನ ರಚನೆ, ಗೈಡ್ ವಿದ್ಯಾರ್ಥಿಯಾದ ಗೌತಮಿ ಚಿತ್ರಕಲೆ 7ನೇ ತರಗತಿ, ಸ್ಕೌಟ್ ವಿದ್ಯಾರ್ಥಿಯಾದ ಆಶಿಶ್ ಆರ್ ಕಾಮತ್ ಏಳನೇ ತರಗತಿ ಚಿತ್ರಕಲೆ ಇವರುಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ತಮ್ಮದಾಗಿಸಿಕೊಂಡಿರುತ್ತಾರೆ.

ಇವರಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತರು ಆಗಿರುವ ಬಿ ಸೋಮಶೇಖರ್ ಶೆಟ್ಟಿ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಪ್ರೋತ್ಸಾಹ ಹಾಗೂ ಸಹಕಾರದೊಂದಿಗೆ ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ತಮ್ಮದಾಗಿಸಿಕೊಂಡಿರುತ್ತಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya
error: Content is protected !!