24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya
error: Content is protected !!