23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!