23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ತಂಡದ ವತಿಯಿಂದ ಗ್ರಾಮದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಅಳವಡಿಸಬಹುದಾದ ಭಾರತ ಸಂವಿಧಾನದ ಪೀಠಿಕೆಯ ಮುದ್ರಿತ ಪ್ರತಿಯನ್ನು ಇತ್ತೀಚೆಗೆ ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಜಗತ್ತಿನ ಅತ್ಯಂತ ದೊಡ್ದ ಪ್ರಜಾಪ್ರಭುತ್ವ ದೇಶವಾದ ನಮ್ಮ ದೇಶದ ಪವಿತ್ರ ಗ್ರಂಥ ಸಂವಿಧಾನದ ಮಹತ್ವದ ಆಶಯವನ್ನು ಎತ್ತಿ ಹಿಡಿಯುವ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ವಾಚಿಸುವಂತೆ ರಾಜ್ಯ ಸರಕಾರ ಆದೇಶಿದೆ.
ಈ ಸಂದರ್ಭ ಸಂವಿಧಾನದ ಆಶಯ ಹಾಗೂ ಅದರ ಪ್ರಾಮುಖ್ಯತೆ ಜಾಗೃತಗೊಳಿಸುವ ಉದ್ದೇಶದೊಂದಿಗೆ ಸರಕಾರ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ್ದು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಲಿದೆ ಎಂದು ಸಂವಿಧಾನ ಪೀಠಿಕೆ ಹಸ್ತಾಂತರಿಸಿದ ಭೀಮ್ ರಮಾ ತಂಡದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದರು.

ಭೀಮ್ ರಮಾ ತಂಡದ ಪದಾಧಿಕಾರಿಗಳು, ಸದಸ್ಯರು ಗ್ರಾಮದ ಸ.ಹಿ.ಪ್ರಾ. ಶಾಲೆ ಬಜಿಲ, ಸ.ಹಿ.ಪ್ರಾ. ಶಾಲೆ ಆದೂರ್ ಪೇರಾಲ್, ಸ.ಪ್ರೌ.ಶಾಲೆ ಕೊಯ್ಯುರು, ಸ.ಕಿ.ಪ್ರಾ.ಶಾಲೆ ಉಣ್ಣಾಲು, ಸ.ಹಿ.ಪ್ರಾ.ಶಾಲೆ ಕೊಯ್ಯುರು ದೇವಸ್ಥಾನ, ಸ.ಹಿ.ಪ್ರಾ.ಶಾಲೆ ಮಲೆಬೆಟ್ಟು ಶಾಲೆಗಳಿಗೆ ಭೇಟಿ ನೀಡಿ ಸಂವಿಧಾನ ಪೀಠಿಕೆಯ ಮುದ್ರಿತ ಫಲಕವನ್ನು ಕೊಡುಗೆಯಾಗಿ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಕೊಯ್ಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಮೋಹನ್, ಉಪನ್ಯಾಸಕಿ ತೃಪ್ತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ., ಸಹಶಿಕ್ಷಕರಾದ ರಾಮಚಂದ್ರ ದೊಡ್ಡಮನಿ, ದೀಪ್ತಿ ಹೆಗ್ಡೆ , ಗೀತಾ , ಸುಧಾಕರ್, ಭೀಮ್ ರಮಾ ಬಳಗದ ಮಾಜಿ ಅಧ್ಯಕ್ಷ ನಿತೇಶ್ ಕೆ.ವಿ., ಸದಸ್ಯರು, ಕಾಲೇಜು ವಿದ್ಯಾರ್ಥಿ ನಾಯಕ ಡಿ.ವಿ.ರಕ್ಷಿತ್ ಉಪಸ್ಥಿತರಿದ್ದರು.

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
error: Content is protected !!