September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ತಂಡದ ವತಿಯಿಂದ ಗ್ರಾಮದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಅಳವಡಿಸಬಹುದಾದ ಭಾರತ ಸಂವಿಧಾನದ ಪೀಠಿಕೆಯ ಮುದ್ರಿತ ಪ್ರತಿಯನ್ನು ಇತ್ತೀಚೆಗೆ ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಜಗತ್ತಿನ ಅತ್ಯಂತ ದೊಡ್ದ ಪ್ರಜಾಪ್ರಭುತ್ವ ದೇಶವಾದ ನಮ್ಮ ದೇಶದ ಪವಿತ್ರ ಗ್ರಂಥ ಸಂವಿಧಾನದ ಮಹತ್ವದ ಆಶಯವನ್ನು ಎತ್ತಿ ಹಿಡಿಯುವ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ವಾಚಿಸುವಂತೆ ರಾಜ್ಯ ಸರಕಾರ ಆದೇಶಿದೆ.
ಈ ಸಂದರ್ಭ ಸಂವಿಧಾನದ ಆಶಯ ಹಾಗೂ ಅದರ ಪ್ರಾಮುಖ್ಯತೆ ಜಾಗೃತಗೊಳಿಸುವ ಉದ್ದೇಶದೊಂದಿಗೆ ಸರಕಾರ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ್ದು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಲಿದೆ ಎಂದು ಸಂವಿಧಾನ ಪೀಠಿಕೆ ಹಸ್ತಾಂತರಿಸಿದ ಭೀಮ್ ರಮಾ ತಂಡದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದರು.

ಭೀಮ್ ರಮಾ ತಂಡದ ಪದಾಧಿಕಾರಿಗಳು, ಸದಸ್ಯರು ಗ್ರಾಮದ ಸ.ಹಿ.ಪ್ರಾ. ಶಾಲೆ ಬಜಿಲ, ಸ.ಹಿ.ಪ್ರಾ. ಶಾಲೆ ಆದೂರ್ ಪೇರಾಲ್, ಸ.ಪ್ರೌ.ಶಾಲೆ ಕೊಯ್ಯುರು, ಸ.ಕಿ.ಪ್ರಾ.ಶಾಲೆ ಉಣ್ಣಾಲು, ಸ.ಹಿ.ಪ್ರಾ.ಶಾಲೆ ಕೊಯ್ಯುರು ದೇವಸ್ಥಾನ, ಸ.ಹಿ.ಪ್ರಾ.ಶಾಲೆ ಮಲೆಬೆಟ್ಟು ಶಾಲೆಗಳಿಗೆ ಭೇಟಿ ನೀಡಿ ಸಂವಿಧಾನ ಪೀಠಿಕೆಯ ಮುದ್ರಿತ ಫಲಕವನ್ನು ಕೊಡುಗೆಯಾಗಿ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಕೊಯ್ಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಮೋಹನ್, ಉಪನ್ಯಾಸಕಿ ತೃಪ್ತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ., ಸಹಶಿಕ್ಷಕರಾದ ರಾಮಚಂದ್ರ ದೊಡ್ಡಮನಿ, ದೀಪ್ತಿ ಹೆಗ್ಡೆ , ಗೀತಾ , ಸುಧಾಕರ್, ಭೀಮ್ ರಮಾ ಬಳಗದ ಮಾಜಿ ಅಧ್ಯಕ್ಷ ನಿತೇಶ್ ಕೆ.ವಿ., ಸದಸ್ಯರು, ಕಾಲೇಜು ವಿದ್ಯಾರ್ಥಿ ನಾಯಕ ಡಿ.ವಿ.ರಕ್ಷಿತ್ ಉಪಸ್ಥಿತರಿದ್ದರು.

Related posts

ಉಜಿರೆ ಬಂಟರ ಸಂಘ ಗ್ರಾಮ ಸಮಿತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!