25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ತಂಡದ ವತಿಯಿಂದ ಗ್ರಾಮದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಅಳವಡಿಸಬಹುದಾದ ಭಾರತ ಸಂವಿಧಾನದ ಪೀಠಿಕೆಯ ಮುದ್ರಿತ ಪ್ರತಿಯನ್ನು ಇತ್ತೀಚೆಗೆ ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಜಗತ್ತಿನ ಅತ್ಯಂತ ದೊಡ್ದ ಪ್ರಜಾಪ್ರಭುತ್ವ ದೇಶವಾದ ನಮ್ಮ ದೇಶದ ಪವಿತ್ರ ಗ್ರಂಥ ಸಂವಿಧಾನದ ಮಹತ್ವದ ಆಶಯವನ್ನು ಎತ್ತಿ ಹಿಡಿಯುವ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ವಾಚಿಸುವಂತೆ ರಾಜ್ಯ ಸರಕಾರ ಆದೇಶಿದೆ.
ಈ ಸಂದರ್ಭ ಸಂವಿಧಾನದ ಆಶಯ ಹಾಗೂ ಅದರ ಪ್ರಾಮುಖ್ಯತೆ ಜಾಗೃತಗೊಳಿಸುವ ಉದ್ದೇಶದೊಂದಿಗೆ ಸರಕಾರ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ್ದು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಲಿದೆ ಎಂದು ಸಂವಿಧಾನ ಪೀಠಿಕೆ ಹಸ್ತಾಂತರಿಸಿದ ಭೀಮ್ ರಮಾ ತಂಡದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದರು.

ಭೀಮ್ ರಮಾ ತಂಡದ ಪದಾಧಿಕಾರಿಗಳು, ಸದಸ್ಯರು ಗ್ರಾಮದ ಸ.ಹಿ.ಪ್ರಾ. ಶಾಲೆ ಬಜಿಲ, ಸ.ಹಿ.ಪ್ರಾ. ಶಾಲೆ ಆದೂರ್ ಪೇರಾಲ್, ಸ.ಪ್ರೌ.ಶಾಲೆ ಕೊಯ್ಯುರು, ಸ.ಕಿ.ಪ್ರಾ.ಶಾಲೆ ಉಣ್ಣಾಲು, ಸ.ಹಿ.ಪ್ರಾ.ಶಾಲೆ ಕೊಯ್ಯುರು ದೇವಸ್ಥಾನ, ಸ.ಹಿ.ಪ್ರಾ.ಶಾಲೆ ಮಲೆಬೆಟ್ಟು ಶಾಲೆಗಳಿಗೆ ಭೇಟಿ ನೀಡಿ ಸಂವಿಧಾನ ಪೀಠಿಕೆಯ ಮುದ್ರಿತ ಫಲಕವನ್ನು ಕೊಡುಗೆಯಾಗಿ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಕೊಯ್ಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಮೋಹನ್, ಉಪನ್ಯಾಸಕಿ ತೃಪ್ತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ., ಸಹಶಿಕ್ಷಕರಾದ ರಾಮಚಂದ್ರ ದೊಡ್ಡಮನಿ, ದೀಪ್ತಿ ಹೆಗ್ಡೆ , ಗೀತಾ , ಸುಧಾಕರ್, ಭೀಮ್ ರಮಾ ಬಳಗದ ಮಾಜಿ ಅಧ್ಯಕ್ಷ ನಿತೇಶ್ ಕೆ.ವಿ., ಸದಸ್ಯರು, ಕಾಲೇಜು ವಿದ್ಯಾರ್ಥಿ ನಾಯಕ ಡಿ.ವಿ.ರಕ್ಷಿತ್ ಉಪಸ್ಥಿತರಿದ್ದರು.

Related posts

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya
error: Content is protected !!