23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ ಕೇಶವ ಫಡಕೆ ಮತ್ತು ಶ್ರೀಮತಿ ಉಷಾ ಅವರನ್ನು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸೆ.19 ರಂದು ನಡೆದ ಗಣೇಶೋತ್ಸವದಲ್ಲಿ ಗೌರವಿಸಲಾಯಿತು.


1980-1990 ರ ದಶಕದಲ್ಲಿ ಮಲವಂತಿಗೆ (ದಿಡುಪೆ) ಗ್ರಾಮವು ಮಾಧ್ಯಮಗಳಿಂದ ಕುಗ್ರಾಮ ಎಂದು ಗುರುತಿಸಲ್ಪಟ್ಟ ಅತೀ ಹಿಂದುಳಿದ ಪ್ರದೇಶವಾಗಿತ್ತು ಮತ್ತು ಕುಗ್ರಾಮ” ಎಂಬ ಪದಕ್ಕೆ ಅನ್ವರ್ಥವೇ ಆಗಿತ್ತು ಅಭಿವೃದ್ಧಿ ಎಂಬುವುದು ಮರೀಚಿಕೆ ಆಗಿದ್ದ ಸಮಯದಿಂದ ಗ್ರಾಮದ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳನ್ನು ತನ್ನದೇ ಆದ ದಾರಿಯಲ್ಲಿ ಪ್ರಯತ್ನಗಳನ್ನು ನಡೆಸಿ ತೆರೆಯಮರೆಯಲ್ಲಿ ಹಲವು ಜನೋಪಯೋಗಿ ಕಾರ್ಯಗಳನ್ನು ಊರಿಗೆ ತಂದವರಲ್ಲಿ ಕೇಶವ ಫಡಕೆಯವರು ಒಬ್ಬರಾಗಿದ್ದಾರೆ. ಧಾರ್ಮಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ, ಭಜನಾ ಸಂಘ, ಸಾಹಿತ್ಯ ಸಮ್ಮೇಳನ, ಸಹಕಾರಿ ಸಂಸ್ಥೆಗಳು, ಶಿಕ್ಷಣ ರಂಗದಲ್ಲಿ ಸಕ್ರೀಯ ಸದಸ್ಯರಾಗಿ, ಪ್ರಾಮಾಣಿಕ, ನಿಸ್ವಾರ್ಥ ಮನೋಭಾವದಿಂದ ಇವರು ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವಕರೆಂದು ಗುರುತಿಸಿಕೊಂಡಿರುವ ಕೇಶವ ಫಡಕೆಯವರು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಲ್ಲಿ ಕಳೆದ 37 ವರ್ಷಗಳಿಂದ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿಯೂ ಪಾತ್ರವಹಿಸಿದ್ದಾರೆ.

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya
error: Content is protected !!