July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ ಕೇಶವ ಫಡಕೆ ಮತ್ತು ಶ್ರೀಮತಿ ಉಷಾ ಅವರನ್ನು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸೆ.19 ರಂದು ನಡೆದ ಗಣೇಶೋತ್ಸವದಲ್ಲಿ ಗೌರವಿಸಲಾಯಿತು.


1980-1990 ರ ದಶಕದಲ್ಲಿ ಮಲವಂತಿಗೆ (ದಿಡುಪೆ) ಗ್ರಾಮವು ಮಾಧ್ಯಮಗಳಿಂದ ಕುಗ್ರಾಮ ಎಂದು ಗುರುತಿಸಲ್ಪಟ್ಟ ಅತೀ ಹಿಂದುಳಿದ ಪ್ರದೇಶವಾಗಿತ್ತು ಮತ್ತು ಕುಗ್ರಾಮ” ಎಂಬ ಪದಕ್ಕೆ ಅನ್ವರ್ಥವೇ ಆಗಿತ್ತು ಅಭಿವೃದ್ಧಿ ಎಂಬುವುದು ಮರೀಚಿಕೆ ಆಗಿದ್ದ ಸಮಯದಿಂದ ಗ್ರಾಮದ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳನ್ನು ತನ್ನದೇ ಆದ ದಾರಿಯಲ್ಲಿ ಪ್ರಯತ್ನಗಳನ್ನು ನಡೆಸಿ ತೆರೆಯಮರೆಯಲ್ಲಿ ಹಲವು ಜನೋಪಯೋಗಿ ಕಾರ್ಯಗಳನ್ನು ಊರಿಗೆ ತಂದವರಲ್ಲಿ ಕೇಶವ ಫಡಕೆಯವರು ಒಬ್ಬರಾಗಿದ್ದಾರೆ. ಧಾರ್ಮಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ, ಭಜನಾ ಸಂಘ, ಸಾಹಿತ್ಯ ಸಮ್ಮೇಳನ, ಸಹಕಾರಿ ಸಂಸ್ಥೆಗಳು, ಶಿಕ್ಷಣ ರಂಗದಲ್ಲಿ ಸಕ್ರೀಯ ಸದಸ್ಯರಾಗಿ, ಪ್ರಾಮಾಣಿಕ, ನಿಸ್ವಾರ್ಥ ಮನೋಭಾವದಿಂದ ಇವರು ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವಕರೆಂದು ಗುರುತಿಸಿಕೊಂಡಿರುವ ಕೇಶವ ಫಡಕೆಯವರು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಲ್ಲಿ ಕಳೆದ 37 ವರ್ಷಗಳಿಂದ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿಯೂ ಪಾತ್ರವಹಿಸಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya
error: Content is protected !!