24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!