22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya
error: Content is protected !!