37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ.

ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿಯಾಗಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಪಿಐಎಂ ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಬಿ.ಎಂ ಭಟ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿಯ ತಮ್ಮ ಕಚೇರಿಗೆ ಬರುತ್ತಿರುವ ಸಮಯ ನೀರಚಿಲುಮೆ ಬಳಿ ಕಾರು ಅವರ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯ ಎಡಬದಿಗೆ ಚಲಿಸಿದ್ದು, ಕೂಡಲೇ ಅವರು ಕಾರನ್ನು ಬಲಬದಿಗೆ ತಿರುಗಿಸಿದಾಗ ಕಾರು ಬಲಬದಿಯ ರಸ್ತೆ ಚರಂಡಿಗೆ ಬಿದ್ದಿತ್ತೆನ್ನಲಾಗಿದೆ. ಕಾರಿನ ಎದುರು ಭಾಗ ಜಖಂಗೊಂಡಿದ್ದು, ಬಿ.ಎಂ ಭಟ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗಿನ ವೇಳೆ ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಧಿಕವಿದ್ದು, ಇವರ ಕಾರು ಅಪಘಾತವಾಗುವ ವೇಳೆ ಎದುರಿನಿಂದ ಯಾವುದೇ ವಾಹನ ಬಾರದಿರುವುದರಿಂದ ಸಂಭವೀನಿಯ ಅಪಘಾತ ತಪ್ಪಿದೆ.

Related posts

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya
error: Content is protected !!