ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ.

ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿಯಾಗಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಪಿಐಎಂ ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಬಿ.ಎಂ ಭಟ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿಯ ತಮ್ಮ ಕಚೇರಿಗೆ ಬರುತ್ತಿರುವ ಸಮಯ ನೀರಚಿಲುಮೆ ಬಳಿ ಕಾರು ಅವರ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯ ಎಡಬದಿಗೆ ಚಲಿಸಿದ್ದು, ಕೂಡಲೇ ಅವರು ಕಾರನ್ನು ಬಲಬದಿಗೆ ತಿರುಗಿಸಿದಾಗ ಕಾರು ಬಲಬದಿಯ ರಸ್ತೆ ಚರಂಡಿಗೆ ಬಿದ್ದಿತ್ತೆನ್ನಲಾಗಿದೆ. ಕಾರಿನ ಎದುರು ಭಾಗ ಜಖಂಗೊಂಡಿದ್ದು, ಬಿ.ಎಂ ಭಟ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗಿನ ವೇಳೆ ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಧಿಕವಿದ್ದು, ಇವರ ಕಾರು ಅಪಘಾತವಾಗುವ ವೇಳೆ ಎದುರಿನಿಂದ ಯಾವುದೇ ವಾಹನ ಬಾರದಿರುವುದರಿಂದ ಸಂಭವೀನಿಯ ಅಪಘಾತ ತಪ್ಪಿದೆ.

Leave a Comment

error: Content is protected !!