July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ.

ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿಯಾಗಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಪಿಐಎಂ ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಬಿ.ಎಂ ಭಟ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿಯ ತಮ್ಮ ಕಚೇರಿಗೆ ಬರುತ್ತಿರುವ ಸಮಯ ನೀರಚಿಲುಮೆ ಬಳಿ ಕಾರು ಅವರ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯ ಎಡಬದಿಗೆ ಚಲಿಸಿದ್ದು, ಕೂಡಲೇ ಅವರು ಕಾರನ್ನು ಬಲಬದಿಗೆ ತಿರುಗಿಸಿದಾಗ ಕಾರು ಬಲಬದಿಯ ರಸ್ತೆ ಚರಂಡಿಗೆ ಬಿದ್ದಿತ್ತೆನ್ನಲಾಗಿದೆ. ಕಾರಿನ ಎದುರು ಭಾಗ ಜಖಂಗೊಂಡಿದ್ದು, ಬಿ.ಎಂ ಭಟ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗಿನ ವೇಳೆ ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಧಿಕವಿದ್ದು, ಇವರ ಕಾರು ಅಪಘಾತವಾಗುವ ವೇಳೆ ಎದುರಿನಿಂದ ಯಾವುದೇ ವಾಹನ ಬಾರದಿರುವುದರಿಂದ ಸಂಭವೀನಿಯ ಅಪಘಾತ ತಪ್ಪಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!