ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಜಯಾನಂದ ಲಾಯಿಲ ಇವರು 2021, 2022, 2023 ನೇ ಸಾಲಿನ ‘ಮುಖ್ಯಮಂತ್ರಿ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


ಬೆಳ್ತಂಗಡಿ ತಾಲೂಕಿನ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಕಳೆದ 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. ಸೆ.22 ರಂದು ಬೆಂಗಳೂರಿನ ಆರ್.ಎ ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಬನ್ನೇರುಘಟ್ಟದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಜಯಾನಂದ ಅವರು ಬೆಳ್ತಂಗಡಿ ತಾಲೂಕು ಪಂಚಾಯತದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Comment

error: Content is protected !!